ಮದ್ಯಪಾನ ಮಾಡಲು ಹಣ ಕೊಟ್ಟಿಲ್ಲವೆಂದು ಮನೆಗೆ ಬೆಂಕಿ ಹಚ್ಚಿದ ಪುತ್ರ
ಮೈಸೂರು: ತಾಯಿ ಕುಡಿಯಲು ಹಣ ಕೊಟ್ಟಿಲ್ಲವೆಂದು ಮಗ ಮನೆಗೆ ಬೆಂಕಿ ಹಚ್ಚಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಶಿವಪ್ರಸಾದ್ (26) ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿ ಯುವಕ.
ತಾಯಿ ಕಲಾವತಿ ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕಲಾವತಿ ಅವರ ಪತಿ ಎರಡನೇ ಮದುವೆ ಮಾಡಿಕೊಂಡು ಪ್ರತ್ಯೇಕ ಸಂಸಾರ ನಡೆಸುತ್ತಿದ್ದಾರೆ. ಕಲಾವತಿಗೆ ಇಬ್ಬರು ಮಕ್ಕಳಿದ್ದು, ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ.
ಎರಡನೇ ಮಗ ಶಿವಪ್ರಸಾದ್ ಕುಡಿತದ ಚಟಕ್ಕೆ ಬಿದ್ದಿದ್ದಾನೆ. ಅಂತೆಯೇ ಆಗಾಗ ತಾಯಿಗೆ ಕಿರುಕುಳ ನೀಡಿ ಹಣ ಕಿತ್ತುಕೊಂಡು ಹೋಗುತ್ತಿದ್ದ. ಎರಡು ದಿನಗಳ ಹಿಂದೆ ಶಿವಪ್ರಸಾಸ್ ಕುಡಿಯಲು ಹಣ ಕೇಳಿದ್ದ. ಕಲಾವತಿಯವರು ಹಣ ನೀಡುವುದಿಲ್ಲವೆಂದು ನಿರಾಕರಿಸಿದ್ದರು.




