December 16, 2025

ಪೆನ್ನಿನ ವಿಚಾರಕ್ಕೆ ಗಲಾಟೆ: ಕಣ್ಣುಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ

0
image_editor_output_image406359445-1757495851180.jpg

ಬಾಗಲಕೋಟೆ: ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.

ಇದರಿಂದ ತೀವ್ರಗೊಂಡಿರುವ 53 ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಇನ್ನು ಕಣ್ಣು ಕಳೆದುಕೊಂಡ ವಿದ್ಯಾರ್ಥಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!