March 4, 2026

ಅಪರಿಚಿತ ಸಾವುಗಳ ಕುರಿತು ಬೆಳ್ತಂಗಡಿ ಎಸ್ಐಟಿ ಕಚೇರಿ ತೆರಳಿ ದೂರು ನೀಡಿ ಮಹೇಶ್ ಶೆಟ್ಟಿ ತಿಮರೋಡಿ

0
image_editor_output_image-151297237-1757660743890.jpg

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಲೇ ಇದ್ದು, ನಿನ್ನೆ ಸೌಜನ್ಯ ಮಾವ ಹೆಣಗಳ ರಾಶಿ ಕುರಿತಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳ ಗ್ರಾಮದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತಂತೆ ತನಿಖೆ ನಡೆಸುವಂತೆ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!