ಕಾಸರಗೋಡು: ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆಗೆ ಶರಣು
ಕಾಸರಗೋಡು ಅಕ್ಟೋಬರ್ 01: ಡಿವೈಎಫ್ಐ ನಾಯಕಿ ಯುವ ವಕೀಲೆ ರಂಜಿತಾ(30) ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿವೈಎಫ್ಐ ಮಹಿಳಾ ಸಂಘದ ಪ್ರದೇಶ ಸಮಿತಿಯ ಅಧ್ಯಕ್ಷೆ ಮತ್ತು ವಕೀಲೆಯಾಗಿರುವ ರಂಜಿತಾ ಕುಂಬ್ಳದಲ್ಲಿರುವ ತಮ್ಮ ಕಚೇರಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರನ್ ಮತ್ತು ಕುಂಬ್ಳ ಬತ್ತೇರಿಯ ವಾರಿಜಾಕ್ಷಿ ದಂಪತಿಯ ಪುತ್ರಿ. ಅವರ ಪತಿ ಕೃತೇಶ್, ಅವರ ಎಂಟು ವರ್ಷದ ಮಗ ಮತ್ತು ಅವರ ಸಹೋದರ ಸುಜಿತ್ ಅವರನ್ನು ಅಗಲಿದ್ದಾರೆ.
ಮೃತದೇಹದ ಬಳಿ ಒಂದು ಚೀಟಿ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕೆಯ ಸಾವು ಪಕ್ಷದ ಕಾರ್ಯಕರ್ತರು ಮತ್ತು ಸಹಚರ ಅಘಾತಕ್ಕೆ ಉಂಟು ಮಾಡಿದೆ. ರಂಜಿತಾ ಅವರ ಸಹೋದರ, ಸಿಪಿಐ(ಎಂ) ಕಾರ್ಯಕರ್ತ ಮತ್ತು ಆಟೋರಿಕ್ಷಾ ಚಾಲಕ ಅಜಿತ್ ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಪತಿ ಮತ್ತು ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಕುಂಬ್ಳೆ ಸೇವಾ ಸಹಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.




