July 4, 2026

ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್‌: 19 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮ

0
image_editor_output_image500917535-1759470927496.jpg

ಬೆಂಗಳೂರು: ಕನಕಪುರ ಮುಖ್ಯ ರಸ್ತೆಯ ಯೆಲಚೇನಹಳ್ಳಿಯಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣದ ನೆಲಮಾಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 19 ವಿದ್ಯುತ್ ಚಾಲಿತ ವಾಹನಗಳು ಸುಟ್ಟು ಭಸ್ಮವಾಗಿವೆ.

ಕನಕಪುರ ರಸ್ತೆಯ ಮಣಿಪಾಲ್ ಆಸ್ಪತ್ರೆ ಹತ್ತಿರದ ಡೊಮಿನಾಸ್ ಮಳಿಗೆಯ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ.

ಕೆಳಹಂತದ ವಾಹನ ನಿಲುಗಡೆ ಪ್ರದೇಶದಲ್ಲಿ ವಿದ್ಯುತ್‌ ಚಾಲಿತ ಸ್ಕೂಟರ್‌ಗಳು ಚಾರ್ಜಿಂಗ್ ಹಾಕಿದ್ದಾಗ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹೊತ್ತಿ ಕೊಂಡಿದೆ.

ಪರಿಣಾಮ ವಾಹನ ನಿಲುಗಡೆ ಪ್ರದೇಶದಲ್ಲೇ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ಗೆ ಕಿಡಿ ತಾಕಿದ್ದರಿಂದ ಸಿಡಿದು ಬೆಂಕಿ ಜ್ವಾಲೆ ಧಗಧಗಿಸಿದೆ. ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಸಿಬ್ಬಂದಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!