February 2, 2026

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

0
image_editor_output_image-231495581-1760086106051.jpg

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.

ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!