August 12, 2026

ಕಾರ್ಕಳ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ

0
image_editor_output_image629889697-1760423027763.jpg

ಹೆಬ್ರಿ: ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರ್ಕೂರಿ ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಲಿಸುತ್ತಿರುವ ರೈಲಿನಡಿ ಬಿದ್ದು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಇವರು ಹೆಬ್ರಿಯಲ್ಲಿ ವೈನ್ ಶಾಪ್ ನಡೆಸುತ್ತಿದ್ದರು.ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸುದೀಪ್ ಬಂಡಾರಿಯವರು ತಾಯಿ ಪತ್ತಿ ಇಬ್ಬರು ಮಕ್ಕಳು ಸಹೋದರ ಹಾಗೂ ಸಹೋದರಿಯನ್ನ ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಮೃತದೇಹ ಶವಪರೀಕ್ಷೆಗೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!