IPS ಅಧಿಕಾರಿ ವೈ.ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣ: ತನಿಖೆ ಮಾಡುತ್ತಿದ್ದ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಚಂಡೀಗಢ: ಹರಿಯಾಣ ಐಪಿಎಸ್ ಅಧಿಕಾರಿ ವೈ.ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಇದೇ ಪ್ರಕರಣದ ತನಿಖೆಯಲ್ಲಿದ್ದ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೋಹ್ಟಕ್ನ ಸೈಬರ್ ಸೆಲ್ನಲ್ಲಿ ಸಹಾಯಕ ಸಬ್-ಇನ್ಸ್ಪೆಕ್ಟರ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದ ಸಂದೀಪ್ ಕುಮಾರ್, ವೈ.ಪೂರನ್ ಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಅವರು, ‘ಸತ್ಯಕ್ಕಾಗಿ’ ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವುದಾಗಿ ಡೆತ್ನೋಟ್ನಲ್ಲಿ ತಿಳಿಸಿದ್ದಾರೆ.
ರೋಹ್ಟಕ್ನ ಹೊಲವೊಂದರಲ್ಲಿ ಸಂದೀಪ್ ಕುಮಾರ್ ತನ್ನ ಸೇವಾ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವೀಡಿಯೊ ಮತ್ತು ಮೂರು ಪುಟಗಳ ಡೆತ್ನೋಟ್ ಬಿಟ್ಟು ಹೋಗಿದ್ದಾರೆ. ವೈ.ಪೂರನ್ ಕುಮಾರ್ ಒಬ್ಬ ‘ಭ್ರಷ್ಟ ಪೊಲೀಸ್’ ಆಗಿದ್ದರು. ತಮ್ಮ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡರು ಎಂದು ಸಂದೀಪ್ ಕುಮಾರ್ ಆರೋಪಿಸಿದ್ದಾರೆ.




