February 2, 2026

ಮೂಡುಬಿದಿರೆ: ಟ್ರ್ಯಾಕ್ಟ‌ರ್ ಸಹಿತ ಬಾವಿಗೆ ಬಿದ್ದು ಯುವಕ ಸಾವು

0
image_editor_output_image1381236421-1761047289110.jpg

ಮೂಡುಬಿದಿರೆ: ಯುವಕನೋರ್ವ ಟ್ರ್ಯಾಕ್ಟರ್‌ ತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಟ್ರ್ಯಾಕ್ಟ‌ರ್ ಸಹಿತ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಒಂಬೆಟ್ಟು ನಿವಾಸಿ ರಾಜೇಶ್ (38) ಎಂದು ಗುರುತಿಸಲಾಗಿದೆ. ರಾಜೇಶ್ ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರಿಗೆ ಸೇರಿದ ಟ್ರ್ಯಾಕ್ಟ‌ರ್ ಅನ್ನು ಬಾವಿಯ ಸಮೀಪ ನಿಲ್ಲಿಸಿ ತೊಳೆಯುತಿದರು.

ಈ ಸಂದರ್ಭ ಟ್ರ್ಯಾಕ್ಟ‌ರ್ ಆಕಸ್ಮಿಕವಾಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿದೆ. ಅದನ್ನು ತಡೆದು ನಿಲ್ಲಿಸಲು ಮುಂದಾದ ರಾಜೇಶ್ ಕೂಡಾ ನಿಯಂತ್ರಣ ತಪ್ಪಿ ಟ್ರ್ಯಾಕ್ಟ‌ರ್ ಜೊತೆ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!