May 4, 2026

ಬೆಳ್ತಂಗಡಿ: ಮನೆ ಸಮೀಪದ ಬಾವಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

0
image_editor_output_image145151523-1761220468099.jpg

ಬೆಳ್ತಂಗಡಿ : ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23 ಗುರುವಾರದಂದು ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ಇವರು ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಇನ್ನು ಖಚಿತವಾಗಿಲ್ಲ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!