ಮಂಗಳೂರು: ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ ವಂಚನೆ: ಆರೋಪಿಯ ಬಂಧನ
ಮಂಗಳೂರು: ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅ.ಕ್ರ. 87-2025, U/S 66(D) IT Act and 318(4) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್ಗಳು ಹಾಗೂ 20,300 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,60,300 ರೂ. ಆಗಿರುತ್ತದೆ.
ಆರೋಪಿಯನ್ನು ನ.5 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.





