ಉಪ್ಪಿನಂಗಡಿ: ಸಹಪಾಠಿ ವಿದ್ಯಾರ್ಥಿಯನ್ನು ನೋಡಲು ಬಂದವರ ಮೇಲೆ ನೈತಿಕ ಪೊಲೀಸ್ ಗಿರಿ: ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಪ್ರಕರಣದ ಪಿರ್ಯಾದಿದಾರರಾದ ವಿಧ್ಯಾರ್ಥಿಯು ಪದವಿ ವ್ಯಾಸಂಗ ಮಾಡುತ್ತಿರುವುದಾಗಿದೆ. ಸದ್ರಿಯವರ ಸಹಪಾಠಿ ವಿದ್ಯಾರ್ಥಿಯೊಬ್ಬ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಪಿರ್ಯಾದಿರವರು ತನ್ನ ಇತರ 09 ಸಹಪಾಠಿ ವಿಧ್ಯಾರ್ಥಿ/ವಿಧ್ಯಾರ್ಥಿನಿಯರೊಂದಿಗೆ ಆತನ ಮನೆಗೆ ತೆರಳುವರೇ, ದಿನಾಂಕ 06-11-2025 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮೋಟಾರ್ ಸೈಕಲ್ ನಲ್ಲಿ ಇಬ್ಬರು ವ್ಯಕ್ತಿಗಳು ಬಂದು, ಸದ್ರಿ ವಿಧ್ಯಾರ್ಥಿ/ವಿಧ್ಯಾರ್ಥಿನಿಯರನ್ನು ತಡೆದು ನಿಲ್ಲಿಸಿರುತ್ತಾರೆ.
ಆ ಬಳಿಕ ಮೋಟಾರ್ ಸೈಕಲ್ ನಲ್ಲಿದ್ದ ಆರೋಪಿಗಳಾದ ಮುಸ್ತಾಫ ಮತ್ತು ಸಹಸವಾರ ಮುಸ್ತಾಫ ಪೆರಿಯಡ್ಕ ಎಂಬವರು ಸದ್ರಿ ವಿಧ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿಧ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 107/2025, ಕಲಂ: 126(2), 352, 351(2), 115(2), 353(2) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.





