ಬೆಳ್ತಂಗಡಿ: ಮನೆ ಕಳ್ಳತನ ಮಾಡುತ್ತಿರುವಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವ್ಯಕ್ತಿ
ಬೆಳ್ತಂಗಡಿ: ಯಾರೂ ಇಲ್ಲದ ಮನೆಯೊಂದಕ್ಕೆ ನುಗ್ಗಿ ಕಳ್ಳತನ ಮಾಡುತ್ತಿರುವ ವೇಳೆ ಸ್ಥಳೀಯರ ಕೈಗೆ ಕುಖ್ಯಾತ ಕಳ್ಳನೊಬ್ಬ ಸಿಕ್ಕಿಬಿದ್ದ ಘಟನೆ ಮಾಲಾಡಿಯಲ್ಲಿ ನಡೆದಿದ್ದು, ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಯು ಕೇರಳ ಹಾಗೂ ಕರ್ನಾಟಕದ ವಿವಿಧ ಠಾಣೆಗಳಲ್ಲಿ 13 ಪ್ರಕರಣಗಳಲ್ಲಿ ಆರೋಪಿಯಾಗಿರುವ ತಲಪಾಡಿ ನಿವಾಸಿ ಕಿರಣ್ ಎಂದು ಗುರುತಿಸಲಾಗಿದೆ. ಮಾಲಾಡಿಯ ನಿವಾಸಿ ಪ್ರೇಮಾ ಶೆಟ್ಟಿ ಎಂಬವರು ಕಳೆದ ಕೆಲ ಸಮಯದಿಂದ ವಿದೇಶದಲ್ಲಿ ಇದ್ದು ಮನೆಯಲ್ಲಿ ಯಾರೂ ಇರದ ಕಾರಣ ಮನೆಗೆ ಬೀಗ ಹಾಕಲಾಗಿತ್ತು.
ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ನವೆಂಬರ್ 9ರಂದು ಬೆಳಗ್ಗೆ ಪ್ರಮಾಶೆಟ್ಟಿ ಅವರ ಮಗಳು ಸಿಸಿಕ್ಯಾಮೆರಾದಲ್ಲಿ ಗಮನಿಸಿದಾಗ ಯಾರೋ ಅಪರಿಚಿತ ವ್ಯಕ್ತಿ ಕಳ್ಳತನಕ್ಕೆ ಪ್ರಯತ್ನಿಸುತ್ತಿರುವುದು ಕಂಡಿದ್ದು, ಕೂಡಲೇ ನೆರೆಮನೆಯ ಪ್ರಕಾಶ್ ಶೆಟ್ಟಿ ಎಂಬವರಿಗೆ ಕರೆ ಮಾಡಿ ಹೇಳಿದ್ದಾರೆ.




