ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.





