January 31, 2026

ಕಾರು ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತ್ಯು

0
image_editor_output_image1779233028-1764084849722.jpg

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!