January 31, 2026

ಚಿಕ್ಕಮಗಳೂರಿನಲ್ಲಿ ರಸ್ತೆ ಅಪಘಾತ: ಮಂಜನಾಡಿ ಇಬ್ರಾಹೀಂ ಮದನಿ ಕಾಮಿಲ್ ಸಖಾಫಿಯ ಪುತ್ರ ಮೃತ್ಯು

0
image_editor_output_image-560469242-1764139374684.jpg

ಉಳ್ಳಾಲ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ಯದ ಮೀಂತ್ರಿ ಎಂಬಲ್ಲಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಮಂಜನಾಡಿ ಇಬ್ರಾಹೀಂ ಮದನಿ ಕಾಮಿಲ್ ಸಖಾಫಿ ಎಂಬವರ ಪುತ್ರ ಜಲಾಲುದ್ದೀನ್ ಹುಮೈದಿ(28) ಮೃತಪಟ್ಟವರು. ಉಡುಪಿ ಖಾಝಿ ಶೈಖುನಾ ಮಾಣಿ ಉಸ್ತಾದ್ ರ ಮೊಮ್ಮಗರಾಗಿರುವ ಜಲಾಲುದ್ದೀನ್ ಹುಮೈದಿ ಇತ್ತೀಚೆಗೆ ಚಿಕ್ಕಮಗಳೂರಿನ ಎನ್‌.ಆ‌ರ್. ಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರಳೆದಿದ್ದಾರೆ.

ಪ್ರತಿಭಾನ್ವಿತ ಯುವ ವಿದ್ವಾಂಸರಾಗಿದ್ದ ಜಲಾಲುದೀನ್ ಹುಮೈದಿಯವರು ಉಪ್ಪಳ್ಳಿ ಶಾದುಲಿ ಜುಮಾ ಮಸೀದಿಯಲ್ಲಿ ಸೇವಾ ನಿರತರಾಗಿದ್ದರು.

Leave a Reply

Your email address will not be published. Required fields are marked *

error: Content is protected !!