ಪ್ರೀ-ವೆಡ್ಡಿಂಗ್ ಶೂಟ್ಗಾಗಿ ತೆರಳಿದ್ದ ಯುವಕ, ಯುವತಿ ಅಪಘಾತದಲ್ಲಿ ಸಾವು
ಕೊಪ್ಪಳ: ಫೋಟೋಶೂಟ್ಗೆ ಹೋಗಿದ್ದ ಭಾವಿ ದಂಪತಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ.
ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳ ಹಾಗೂ ಕಾರಟಗಿ ತಾಲೂಕಿನ ಮುಷ್ಟೂರು ಗ್ರಾಮದ ಕವಿತಾ ಮೃತರು. ಈ ಜೋಡಿಯ ಮದುವೆಯನ್ನು ಇದೇ ತಿಂಗಳ 20ರಂದು ನಿಶ್ಚಯಿಸಲಾಗಿತ್ತು. ಮದುವೆ ಹಿನ್ನೆಲೆ ಇಬ್ಬರು ಪ್ರೀ-ವೆಡ್ಡಿಂಗ್ ಶೂಟ್ಗಾಗಿ ತೆರಳಿದ್ದರು.




