December 16, 2025

ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಮನನೊಂದು ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image-975817180-1765353901604.jpg

ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಯುವಕ ಅಂಜಿನಪ್ಪ (26) ನೇಣು ಬಿಗಿದುಕೊಂಡ ಅತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಅಂಜಿನಪ್ಪ ಪದವಿ ಮುಗಿಸಿದಾಗಿನಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿದ್ದ. ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಕೊಠಡಿಯಲ್ಲಿ ಎಲ್ಲಿ ನೋಡಿದರೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳೇ ಇದ್ದವು. ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!