ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಿಜೆಪಿ ಕಾಯಕರ್ತೆ ಆತ್ಮಹತ್ಯೆ
ಕಲಬುರಗಿ: ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಎಂಬವರ ಮನೆಗೆ ತೆರಳಿ, ಜ್ಯೋತಿ ಪಾಟೀಲ್ ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಮಲ್ಲಿನಾಥ್ ಬಿರಾದಾರ್ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.





