December 20, 2025

ಕುಂದಾಪುರ: ಮೆಹಂದಿ ಮನೆಗೆ ನುಗ್ಗಿ ಪೊಲೀಸರಿಂದ ಲಾಠಿ ಚಾರ್ಜ್:
ಒಂಬತ್ತು ಮಂದಿಗೆ ಗಾಯ

0
n3452980501640696650931036deaf579884065e2f5bef1b6f67ba80c66d949b66d0f6dc5235eeb50163945.jpg

ಕುಂದಾಪುರ: ಮೆಹಂದಿ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ‌ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಿಕೆರೆಯಲ್ಲಿ ಸೋಮವಾರ ರಾತ್ರಿ ಕೇಳಿ ಬಂದಿದೆ.

ಇಲ್ಲಿನ ನಿವಾಸಿ ರಾಜೇಶ್ ಎನ್ನುವಾತನಿಗೆ ಕುಮಟಾದ ಯುವತಿಯೊಂದಿಗೆ ಗುರುವಾರ ಮದುವೆ ನಡೆಯಬೇಕಿದ್ದು ಈ ಪ್ರಯುಕ್ತ ವರನ ಮನೆಯಲ್ಲಿ ಸೋಮವಾರ ಮೆಹಂದಿ ಕಾರ್ಯಕ್ರಮ ನಡೆಯುತಿತ್ತು.

ಈ ಸಂದರ್ಭ ಡಿಜೆ ಶಬ್ಧದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರೋರ್ವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಏಕಾಏಕಿ ಮದುವೆ ಮನೆಗೆ ನುಗ್ಗಿದ ಪೊಲೀಸರು ಮಹಿಳೆಯರು, ಮಕ್ಕಳು ಹಾಗೂ ವರನ ಸಹಿತ ಎಲ್ಲರ ಮೇಲೂ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!