ಮರಕ್ಕೆ ಢಿಕ್ಕಿ ಹೊಡೆದ ಬೊಲೆರೊ ವಾಹನ: ನಾಲ್ವರು ಸಾವು
ಚಿತ್ರದುರ್ಗ: ಬೊಲೆರೊ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಸಂಭಿಸಿದೆ.
ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಹನುಮಂತಪ್ಪ (32) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ. ಒಂದೇ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




