ಕುಂಬಳೆ: ಆರಿಕ್ಕಾಡಿಯಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಪ್ರತಿಭಟನೆ
ಕುಂಬಳೆ : ಕುಂಬಳೆಯ ಆರಿಕ್ಕಾಡಿ ಎಂಬಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಕುಂಬಳೆಯಲ್ಲಿ ಪ್ರತಿಭಟನೆ ನಡೆದಿದೆ.
ಕೊಚ್ಚಿ-ಪನ್ವೇಲ್ ರಾಷ್ಟ್ರೀಯ ಹೆದ್ದಾರಿ 66 ರ ಅರಿಕ್ಕಾಡಿ ಎಂಬಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಪ್ರತಿಭಟನೆಯಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಕೂಡಾ ಭಾಗಿಯಾಗಿದ್ದಾರೆ.
ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.




