March 18, 2026

ಉಡುಪಿ: ಬೈಕ್‌ ಕಳವು ಪ್ರಕರಣ: ಅಂತರರಾಜ್ಯ ಇಬ್ಬರು ಆರೋಪಿಗಳ ಸೆರೆ

0
image_editor_output_image1818555994-1768379388518.jpg

ಉಡುಪಿ: ಉಡುಪಿ ಜಿಲ್ಲೆಯ ಮೂಡನಿಡಂಬೂರು ಗ್ರಾಮದಲ್ಲಿ ವರದಿಯಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಇಬ್ಬರು ಅಂತರರಾಜ್ಯ ಬೈಕ್‌ ಕಳ್ಳತನ ಆರೋಪಿಗಳನ್ನು ಬಂಧಿಸಿ, ಕದ್ದರುವ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳದ ಎರ್ನಾಕುಲಂ ಜಿಲ್ಲೆಯ ನಿವಾಸಿಗಳಾದ ಆಶಿಕ್ ಅನ್ಸಾರ್ ಮತ್ತು ಮೊಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ.

ಮೂಡನಿಡಂಬೂರು ಗ್ರಾಮದ ನಿವಾಸಿ ನಾಗಚಂದ್ರ ನೀಡಿದ ದೂರಿನ ಪ್ರಕಾರ, ಡಿಸೆಂಬರ್ 28 ರಂದು ರಾತ್ರಿ 9 ಗಂಟೆ ಸುಮಾರಿಗೆ, ನಾಗಚಂದ್ರ ಮೂಡನಿಡಂಬೂರಿನ ಕರಾವಳಿ ಬೈಪಾಸ್ ರಸ್ತೆಯಲ್ಲಿರುವ ಲ್ಯಾಂಡ್‌ಮಾರ್ಕ್ ಕಟ್ಟಡದ ಬಳಿ ತನ್ನ ಬೈಕ್‌ ನಿಲ್ಲಿಸಿ ಮನೆಗೆ ಮರಳಿದ್ದರು. ಮರುದಿನ ಬೆಳಿಗ್ಗೆ 7 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಾಗ, ಬೈಕ್‌ ಕದ್ದಿರುವುದು ಕಂಡುಬಂದಿದೆ. ಕದ್ದ ವಾಹನದ ಮೌಲ್ಯ ಸುಮಾರು 70,000 ರೂ. ಎಂದು ಅಂದಾಜಿಸಲಾಗಿದೆ.

ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ ಮತ್ತು ಉಡುಪಿ ನಗರ ಪೊಲೀಸ್ ಠಾಣೆಯ ಪ್ರಭಾರಿ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ ಅವರ ಮೇಲ್ವಿಚಾರಣೆಯಲ್ಲಿ ಅಪರಾಧ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಯಿತು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳಾದ ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ, ಸಿಬ್ಬಂದಿಗಳಾದ ಪ್ರಸನ್ನ ಸಿ, ಸಂತೋಷ್ ರಾಥೋಡ್, ಮಲ್ಲಯ್ಯ ಹಿರೇಮಠ ಮತ್ತು ಶಿವಕುಮಾರ್ ಈ ತಂಡವನ್ನು ನೇತೃತ್ವ ವಹಿಸಿದ್ದರು.

ಜನವರಿ 4 ರಂದು, ಪೊಲೀಸ್ ತಂಡವು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಮುಕ್ಕಂನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದರು. ಆರೋಪಿಯಿಂದ ಕದ್ದ ಕಪ್ಪು ಬಣ್ಣದ ಯಮಹಾ ಆರ್15 ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!