January 31, 2026

ಬಂಟ್ವಾಳ: ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ

0
image_editor_output_image-1752189414-1768477678992.jpg

ಬಂಟ್ವಾಳ : ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಿಸಿರುವ ಘಟನೆ ಬಂಟ್ವಾಳದ ಪಿಲಾತಬೆಟ್ಟುವಿನಲ್ಲಿ ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ ಹಾಕಲಾದ ಕಬ್ಬಿಣದ ತಂತಿಯಲ್ಲಿ ಚಿರತೆಯೊಂದು ಸಿಲುಕಿಕೊಂಡಿತ್ತು. ಬಿಡಿಸಿಕೊಳ್ಳಲಾಗದೆ ಒದ್ದಾಡುತ್ತಿದ್ದ ಚಿರತೆಯನ್ನು ಬೆಳಿಗ್ಗೆ ಸುಮಾರು 9.30ರ ವೇಳೆಗೆ ನೋಡಿದ ಗ್ರಾಮಸ್ಥರು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು ಪಿಲಿಕುಳದ ವೈದ್ಯಾಧಿಕಾರಿ ಯಶಸ್ವಿ ನಾರವಿ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು. ಬಳಿಕ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯನ್ನು ಬಿಡಿಸಿ, ಸುರಕ್ಷಿತವಾಗಿ ಪಂಜರದೊಳಗೆ ಹಾಕಿ ವೇಣೂರು ಅರಣ್ಯ ಇಲಾಖೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಆರೋಗ್ಯವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!