January 31, 2026

ಮೂಡಬಿದಿರೆ: ಹೊಟೇಲ್ ಉದ್ಯಮಕ್ಕೆ ಸಿದ್ದತೆ ಮಾಡಿಕೊಂಡಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1552958594-1768728145875.jpg

ಮೂಡಬಿದಿರೆ: ಊರಲ್ಲಿ ಸ್ವಂತ ಹೊಟೇಲ್ ಉದ್ಯಮ ಪ್ರಾರಂಭ ಮಾಡಲು ಸಿದ್ದತೆ ಮಾಡಿಕೊಂಡಿದ್ದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೂಡುಬಿದಿರೆಯ ನಾಗರಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆ ಬಳಿ ಕಬ್ಬಿನ ಹಾಲಿನ ಅಂಗಡಿ ನಡೆಸುತ್ತಿರುವ ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಎಂದು ಗುರುತಿಸಲಾಗಿದೆ. ದುಬೈನಿಂದ ಹಿಂದಿರುಗಿದ್ದ ದೀಕ್ಷಿತ್, ನಾಗರಕಟ್ಟೆಯ ರಿಂಗ್ ರೋಡ್ ಬಳಿ ಹೊಟೇಲ್ ವ್ಯವಹಾರ ಪ್ರಾರಂಭಿಸಲು ಯೋಜಿಸಿದ್ದರು. ಹಾಗೂ ಹೊಟೇಲ್ ಆರಂಭಿಸಲು ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮಲಗಿದ್ದ ಸಮಯದಲ್ಲಿ, ದೀಕ್ಷಿತ್ ಮನೆಯ ಕೋಣೆಯೊಂದರ ಕಿಟಕಿ ಸರಳಿಗೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!