ಕೊಡಾಜೆ ಐಕ್ಯ ವೇದಿಕೆ ವತಿಯಿಂದ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರಿಗೆ ಸನ್ಮಾನ
ವಿಟ್ಲ : ಐಕ್ಯ ವೇದಿಕೆ (ರಿ) ಕೊಡಾಜೆ ಇದರ ನೂತನ ಕಛೇರಿಗೆ ಬೇಟಿ ನೀಡಿದ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಐಕ್ಯ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ಸಮಾಜಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ಐಕ್ಯ ವೇದಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನೆಟ್ಲಮುಡ್ನೂರು, ಮಾಣಿ, ಅನಂತಾಡಿ ಗ್ರಾಮಗಳಿಗೆ ಸೀಮಿತವಾಗಿರುವ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಐಕ್ಯ ವೇದಿಕೆಯು ಅಧ್ಯಕ್ಷ ಅಶ್ರಫ್ ಭಾರತ್, ಕೋಶಾಧಿಕಾರಿ ರಫೀಕ್ ಎಸ್.ಎಸ್., ಕಾರ್ಯದರ್ಶಿ ಆಬಿದ್ ನೇರಳಕಟ್ಟೆ, ಸದಸ್ಯರಾದ ಅಬೂಬಕ್ಕರ್ (ಅಬ್ಬು), ಮಜೀದ್ ಅನಂತಾಡಿ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ನಿರೂಪಿಸಿದರು.




