January 31, 2026

ಹುಬ್ಬಳ್ಳಿ: ಮುರಿಬಿದ್ದು ಕಟೌಟ್‌ಗಳು: ಮೂವರಿಗೆ ಗಾಯ

0
image_editor_output_image1646023890-1769235509318.jpg

ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ ಕಟೌಟ್‌ಗಳು ಮುರಿದು ಬಿದ್ದು ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!