ಶಿವಮೊಗ್ಗ: ಆಕಸ್ಮಿಕವಾಗಿ ಬೆಂಕಿ ತಗಲಿ ಸುಟ್ಟು ಭಸ್ಮವಾದ ಖಾಸಗಿ ಸ್ಲೀಪರ್ ಬಸ್
ಶಿವಮೊಗ್ಗ: ಚಿತ್ರದುರ್ಗದ ಬಳಿ ನಡೆದ ಬಸ್ ದುರಂತಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ.
ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ.
ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.




