ಬಂಟ್ವಾಳದಲ್ಲಿ ನಡೆಯಲಿರುವ ಮೂಡೂ-ಪಡೂರು ಜೋಡುಕರೆ ಕಂಬಳ: ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ( ಐಬಿ ) ನೀರಿಕ್ಷಣಾ ಮಂದಿರದಲ್ಲಿ ಮಾರ್ಚ್ 7ರಂದು ಬಂಟ್ವಾಳದಲ್ಲಿ ನಡೆಯುವ ಮೂಡೂರು-ಪಡೂರು ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರ ಉಪಸ್ಥಿಯಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ವಿಟ್ಲ ಅರಮನೆ ಅರಸರಾದ ಕೃಷ್ಣಯ್ಯ ಬಲ್ಲಾಳ್, ದ.ಕ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀಧರ್ ಶೆಟ್ಟಿ ವಿಟ್ಲ, ಕಂಬಳ ಸಮಿತಿ ಸಹ ಸಂಚಾಲಕ ಶ್ರೀ ಬಿ. ಸಂದೇಶ್ ಶೆಟ್ಟಿ, ವಿಟ್ಲ ಬ್ಲಾಕ್ ಉಪಾಧ್ಯಕ್ಷ ಶ್ರೀಧರ್ ಬಾಳೆಕಲ್ಲು, ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ಬು ನವಗ್ರಾಮ, ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಿರಾಜ್ ಮದಕ, ಪಾಣೆಮಂಗಳೂರು ಬ್ಲಾಕ್ ಪಂಚಾಯತ್ ರಾಜ್ ಅಧ್ಯಕ್ಷ ಉಮ್ಮರ್ ಕೊಡಂಗೆ, ವಿಟ್ಲ ಪಡ್ನೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಡಂಬು, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಜಿ ಎ ಶಂಶುದ್ದೀನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.




