ಬಾಗಲಕೋಟೆ: ಗೆಳತಿಗಾಗಿ ಇಬ್ಬರು ಸ್ನೇಹಿತರ ಮಧ್ಯೆ ಶುರವಾದ ಜಗಳ ಚಾಕು ಇರಿತದವರೆಗೆ ಹೋಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಸಿದ್ದೇಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದೆ.
19 ವರ್ಷದ ರಾಹುಲ್ ಸಪ್ತಸಾಗರ್ ಚಾಕು ಇರಿತದಿಂದ ಮೃತಪಟ್ಟಿದ್ದಾನೆ. ರಾಹುಲ್ ಸ್ನೇಹಿತ ಶ್ರೇಯಸ್ ಚಾಕು ಇರಿದ ಆರೋಪಿಯಾಗಿದ್ದಾನೆ.