ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ: ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು
ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಜೆಡಿಎಸ್ ಮುಖಂಡೆ ಪುತ್ರನಿಗೆ ಧಾರವಾಡ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.
ಆರೋಪಿ ಚಿರಾಗ್ ಕೊಠಾರಕರ್ಗೆ ಕೋರ್ಟ್ ಜಾಮೀನು ನೀಡಿದೆ. ಯುವತಿ ಆತ್ಮಹತ್ಯೆ ಕೇಸಲ್ಲಿ ಈತನನ್ನು ಜ.29 ರಂದು ಕದ್ರಾ ಪೊಲೀಸರು ಚೆನೈನಲ್ಲಿ ಬಂಧಸಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ಆರೋಪಿ ಜೈಲಿನಲ್ಲಿದ್ದ. ಕೊನೆಗೂ ಚಿರಾಗ್ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ.




