March 28, 2026

ಇಸ್ರೇಲ್ ಮೇಲೆ ಬಳಸಿದ ಕ್ಷಿಪಣಿಗಳ ಮೇಲೆ ‘ಭಾರತದ ಜನರಿಗೆ ಧನ್ಯವಾದಗಳು’ ಎಂದು ಬರೆದ ಇರಾನ್

0
image_editor_output_image-94185751-1774693750306.jpg

ನವದೆಹಲಿ: ಇಸ್ರೇಲ್ ಮೇಲೆ ಇರಾನ್ 83ನೇ ಸುತ್ತಿನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಬಳಸಿದ ಕ್ಷಿಪಣಿಗಳ ಮೇಲೆ ‘ಭಾರತದ ಜನರಿಗೆ ಧನ್ಯವಾದಗಳು’ ಎಂದು ಬರೆಯಲಾಗಿದೆ.

ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್‌ನ ಕಾನ್ಸುಲೇಟ್‌ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ‘ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು’ ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿದೆ.

‘ಭಾರತ, ಚೀನಾ, ರಷ್ಯಾ, ಇರಾಕ್, ಪಾಕಿಸ್ತಾನ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದ್ದೇವೆ. ಈ ಐದು ದೇಶಗಳತ್ತ ತೆರಳುವ ಸರಕು ಸಾಗಣೆ ಹಡಗುಗಳಿಗೆ ನಾವು ಹೊರ್ಮುಜ್ ದಾಟಲು ಅವಕಾಶ ನೀಡಿದ್ದೇವೆ’ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ನಿ ಈಚೆಗೆ ಹೇಳಿದ್ದರು.

ಏತನ್ಮಧ್ಯೆ, ಯುದ್ಧಪೀಡಿತ ಇರಾನ್‌ಗಾಗಿ ಕಾಶ್ಮೀರ ಮತ್ತು ಲಡಾಖ್‌ನ ಕಾರ್ಗಿಲ್‌ನಾದ್ಯಂತ ಬೃಹತ್ ದೇಣಿಗೆ ಅಭಿಯಾನಗಳು ನಡೆದಿದ್ದವು.

Leave a Reply

Your email address will not be published. Required fields are marked *

error: Content is protected !!