April 7, 2026

ವಿಟ್ಲ: ಬೈಕ್ ಮತ್ತು ಲಾರಿ ನಡುವೆ ಅಪಘಾತ: ಬೈಕ್ ಸವಾರ ಗಂಭೀರ

0
image_editor_output_image1086599752-1775563387240

ವಿಟ್ಲ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ಸಂಭವಿಸಿದೆ.

ವಿಟ್ಲದ ನೀರಕಣಿ ನಿವಾಸಿ ಮಹಮ್ಮದ್ ಮುಝಂಬಿಲ್ ಗಾಯಗೊಂಡ ಬೈಕ್ ಸವಾರ. ಈತ ಮಂಗಳೂರಿನ ಕಾಲೇಜ್ ವಿದ್ಯಾರ್ಥಿಯಾಗಿದ್ದು, ಮಂಗಳೂರು ಕಡೆಯಿಂದ ವಿಟ್ಲ ಕಡೆಗ ಬರುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಗಾಯಾಳುವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!