ಪುತ್ತೂರು: ಪಡೀಲ್ ಬಳಿ ಬೈಕ್ಗಳ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಏ.18ರಂದು ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ ಪೂಜಾರಿ ಅವರ ಮಗ ಧನರಾಜ್(21.ವ) ಮೃತಪಟ್ಟ ವ್ಯಕ್ತಿ.
ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಬೈಕ್ ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ, ಸಹಸವಾರ ಸೇರಿದಂತೆ ಇಬ್ಬರಿದ್ದ ಬೈಕ್ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ, ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ಇನ್ನೊಂದು ಭಾಗದಲ್ಲಿ ಪುತ್ತೂರಿನ ಕಡೆಗೆ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಬೈಕ್ ಸವಾರನ ತಲೆಗೆ ತೀವ್ರತರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.




