May 4, 2026

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಗೆಲುವು

0
image_editor_output_image-1568958229-1777892436519

ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 4,967 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕೆಂದ್ರದಿಂದ ಹೊರಬಂದ ಕಾಂಗ್ರೆಸ್ ಮುಖಂಡರು ಮಾಧ್ಯಮಗಳ ಎದುರು ಸಂತಸ ಹಂಚಿಕೊಂಡರು.

ಮತ ಎಣಿಕೆ ಕೇಂದ್ರದ ಎದುರು ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪರಸ್ಪರ ಬಣ್ಣ ಹಚ್ಚಿ ಸಮರ್ಥ್‌ ಶಾಮನೂರು ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಭಾವಚಿತ್ರ ಹಿಡಿದು ನೃತ್ಯ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!