ಉಳ್ಳಾಲ: ಸಿನೆಮಾ ರಂಗದಲ್ಲಿ ತೊಡಗಿಕೊಂಡಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಫ್ಯಾಷನ್ ಡಿಸೈನ್ ಮತ್ತು ಸಿನೆಮಾ ರಂಗದಲ್ಲಿ ತೊಡಗಿಕೊಂಡಿದ್ದ ಯುವಕನೊಬ್ಬ ನಿಗೂಢ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಶಿಲ್ಪಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಸುರೇಶ್ ಅವರ ಪುತ್ರ ಯಜ್ಞೇಶ್ ಉಳ್ಳಾಲ (30) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಯಜ್ಞೇಶ್ ಅವರು ಮನೆಯಲ್ಲಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾಷನ್ ಹಾಗೂ ಸಿನಿಮಾ ಮೇಕಪ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.





