May 22, 2026

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ಳಾರೆಯ ಸೂರಜ್ ರೈ ಸಾವು

0
image_editor_output_image1909245132-1779438940674.jpg

ಬೆಳ್ಳಾರೆ: ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27)ಚಿಕಿತ್ಸೆ ಫಲಕಾರಿಯಾಗದೆ ಮೇ 22ರ ಶುಕ್ರವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಮೇ 15ರಂದು ರಾತ್ರಿ ಸೂರಜ್ ರೈ ಅವರು ಬೆಂಗಳೂರಿಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ಇವರ ಬೈಕ್ ಕೋಳಿ ಸಾಗಾಟದ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸೂರಜ್ ಅವರ ತಲೆಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಕುಣಿಗಲ್‌ನ ಬಿಜಿಎಸ್ (BGS) ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸಾ ಘಟಕದಲ್ಲಿ ಐದು ದಿನಗಳಿಗೂ ಹೆಚ್ಚು ಕಾಲ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಮೃತ ಸೂರಜ್ ರೈ ಅವರು ಕರಾವಳಿಯ ಪ್ರಸಿದ್ಧ ಯಕ್ಷಗುರು ವಾಸುದೇವ ರೈ ವಿ. ಹಾಗೂ ಶರ್ಮಿಳಾ ರೈ ದಂಪತಿಯ ಪುತ್ರನಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಸ್ನೇಹ ಹಾಗೂ ಸಹೋದರ ಸುದೀಪ್ ರೈ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!