ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆಗೈದು ಮೃತದೇಹವನ್ನು ಆಸ್ಪತ್ರೆಯಲ್ಲಿ ಇಟ್ಟು ಪತಿ ಪರಾರಿ
ಹಾಸನ: ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇಟ್ಟು ಪತಿ ಎಸ್ಕೇಪ್ ಆದ ಘಟನೆ ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ನಡೆದಿದೆ.
ಗುಲ್ಷನ್ ಬಾನು (34) ಕೊಲೆಯಾದ ಮಹಿಳೆ. ಪತಿ ಸೈಫ್ ಅಲಿಖಾನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಕಳೆದ 14 ವರ್ಷಗಳ ಹಿಂದೆ ಹಾಸನದ ಚಿಪ್ಪಿನಕಟ್ಟೆಯ ಗುಲ್ಷನ್ ಬಾನು, ಚನ್ನರಾಯಪಟ್ಟಣದ ಸೈಫ್ ಅಲಿಖಾನ್ ಜೊತೆ ವಿವಾಹವಾಗಿದ್ದರು. ದಂಪತಿಗೆ ಎರಡು ಗಂಡು ಮಕ್ಕಳಿದ್ದು ಸೈಫ್ಅಲಿಖಾನ್ ಗಾರೆ ಕೆಲಸ ಮಾಡಿಕೊಂಡಿದ್ದ. ಹಣಕ್ಕಾಗಿ ಮಕ್ಕಳನ್ನು ಮಾರಾಟ ಮಾಡಿದ್ದ ಎಂದು ಆರೋಪಿಲಾಗಿದೆ.





