ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆ
ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ವಿಶ್ವನಾಥ್ (24) ಮೃತ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜುವೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಶ್ವನಾಥ್, ಅಶೋಕ್ ನಗರದ ಪಿಜಿಯಲ್ಲಿದ್ದ. ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.




