ಮಂಗಳೂರಿಗೆ ಬಂದ ತಮಿಳುನಾಡು ಸಿಎಂ ಜೋಸೆಫ್ ವಿಜಯ್
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್ಪೋರ್ಟ್ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಗಳು ಶೀಳ್ಳೆಚಪ್ಪಾಳೆಯ ಮಳೆಗರೆದರು.
ದಳಪತಿ ವಿಜಯ್ ಕೂಡ ಒಮ್ಮೆ ಅಭಿಮಾನಿಗಳತ್ತ ಕೈಬಿಸಿ ನಗುಮುಖದಿಂದ ಉಡುಪಿಯತ್ತ ಹೊರಟರು.




