June 15, 2026

ಕಾಸರಗೋಡು: ಪಳ್ಳಿಕೆರೆ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು: ಮತ್ತಿಬ್ಬರು ವಿದ್ಯಾರ್ಥಿಗಳ ರಕ್ಷಣೆ

0
image_editor_output_image643072965-1781513423586.jpg

ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿಯ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ಸುಮಾರು 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಆರು ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕಾಗಿ ಕಡಲತೀರಕ್ಕೆ ಆಗಮಿಸಿದ್ದು, ಅವರಲ್ಲಿ ನಾಲ್ವರು ಸಮುದ್ರಕ್ಕಿಳಿದಿದ್ದರು.

ವಿದ್ಯಾರ್ಥಿಗಳು ಬೇಕಲ ಕೋಟೆಯನ್ನು ವೀಕ್ಷಿಸಲು ಬಂದಿದ್ದರು. ಘಟನೆಯ ನಂತರ ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ತಡರಾತ್ರಿಯವರೆಗೂ ಇಬ್ಬರು ವಿದ್ಯಾರ್ಥಿಗಳ ಸುಳಿವು ಪತ್ತೆಯಾಗಿರಲಿಲ್ಲ.

ಸಮುದ್ರಪಾಲಾದ ವಿದ್ಯಾರ್ಥಿಗಳಿಗಾಗಿ ಕರಾವಳಿ ಕಾವಲು ಪಡೆ, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!