ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸಿಸಿ ಕ್ಯಾಮಾರ ಅಳವಡಿಕೆ: ವಿಟ್ಲ, ಉಪ್ಪಿನಂಗಡಿ, ಸುಳ್ಯ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಇಂದಿನಿಂದ ಕ್ಯಾಮರಾ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮೊದಲ ಹಂತವಾಗಿ ವಿಟ್ಲ ಪೊಲೀಸ್ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ದಿನಾಂಕ: 23.07.2026 ರಿಂದ ಕಾರ್ಯರಂಭಗೊಂಡಿರುತ್ತದೆ.
ಸದ್ರಿ ಕ್ಯಾಮರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ, ಸಂಬಂಧಪಟ್ಟ ವಾಹನದ ಮಾಲೀಕರಿಗೆ ನೋಟೀಸ್ ನೀಡಲಾಗುವುದು.




