ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಡ್ಯನಡ್ಕ ಸಮೀಪದ ಮನಿಮುಂಡ ಎಂಬಲ್ಲಿ ನಡೆದಿದೆ.
ಮೃತರನ್ನು ದಿನೇಶ್ ನಾಯ್ಕ್ (32) ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರಾಗಿದ್ದ ದಿನೇಶ್ ರವರು ಪತ್ನಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
