ಸಿಎಂ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭಾರಿ ಪ್ರಮಾಣದ ಖಾತೆ ಮರುಹಂಚಿಕೆ ಮಾಡಿ ಆಡಳಿತ ಯಂತ್ರಕ್ಕೆ ಹೊಸ ಚುರುಕು ನೀಡಲಾಗಿದೆ.
ಈ ನೂತನ ಆದೇಶದ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಹಣಕಾಸು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ನಗರಾಭಿವೃದ್ಧಿ (ಬಿಡಿಎ, ಬಿಎಂಆರ್ಡಿಎ ವ್ಯಾಪ್ತಿ), ಕೃಷಿ ಮಾರಾಟ ಮತ್ತು ಇತರ ಹಂಚಿಕೆಯಾಗದ ಎಲ್ಲಾ ಇಲಾಖೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ನೂತನ ಸಚಿವರ ಖಾತೆ:
ಬಿ.ಝೆಡ್. ಜಮೀರ್ ಅಹಮದ್ ಖಾನ್: ವಸತಿ ಇಲಾಖೆ
ರಾಮಲಿಂಗಾರೆಡ್ಡಿ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
ಲಕ್ಷ್ಮಣ ಸವದಿ: ಸಹಕಾರ ಇಲಾಖೆ (ಕೃಷಿ ಮಾರಾಟ ಹೊರತುಪಡಿಸಿ)
ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ ಇಲಾಖೆ
ಕೆ.ಎಚ್. ಮುನಿಯಪ್ಪ: ಸಮಾಜ ಕಲ್ಯಾಣ ಇಲಾಖೆ
ಶಿವರಾಜ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ (ST) ಕಲ್ಯಾಣ ಇಲಾಖೆ
ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
ಎನ್. ಚಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ
ಕೆ.ಎಂ. ಶಿವಲಿಂಗೇಗೌಡ: ಅಬಕಾರಿ ಇಲಾಖೆ
ಸಿ. ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
ವಿಜಯಾನಂದ ಕಾಶಪ್ಪನವರ್: ಸಣ್ಣ ಪ್ರಮಾಣದ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳು
ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ ಇಲಾಖೆ
ಕೆ.ಎಸ್. ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ
ಎಸ್.ಎಸ್. ಮಲ್ಲಿಕಾರ್ಜುನ್: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ
ರಿಜ್ವಾನ್ ಅರ್ಷದ್: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು
ಎ. ನರೇಂದ್ರಸ್ವಾಮಿ: ಕೃಷಿ ಇಲಾಖೆ
ಎಚ್.ಸಿ. ಬಾಲಕೃಷ್ಣ: ಪೌರಾಡಳಿತ ಇಲಾಖೆ
ಬಿ. ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ




