August 15, 2026

ಪುತ್ತೂರು: ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

0
image_editor_output_image1687717329-1786771893703

ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮಾಹಿತಿ ಪ್ರಕಾರ, ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸವಣೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್‌ ಮುಖಾಮುಖಿ ಡಿಕ್ಕಿಯಾಗಿದೆ.

ಈ ಅಪಘಾತದಲ್ಲಿ ಬೈಕ್ ಸವಾರ ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ, ಅಭಿಲಾಷ್(24) ಅವರು ಸ್ಥಳದಲ್ಲೇ ಮೃತಪಟ್ಟರು.ಅಪಘಾತದ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದರು. ಮೃತರು ತಂದೆ, ತಾಯಿ, ಅಣ್ಣನನ್ನು ಅಗಲಿದ್ದಾರೆ. ಘಟನೆ ಕುರಿತು ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!