August 22, 2026

ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಹೊಡೆದಾಟ ಪ್ರಕರಣ: ಓರ್ವ ಆರೋಪಿಯ ಬಂಧನ-3 ಪ್ರತ್ಯೇಕ ಪ್ರಕರಣ ದಾಖಲು

0
image_editor_output_image-1713046913-1787370953534

ಪುತ್ತೂರು, ಆ.22: ಪುತ್ತೂರು ನಗರದ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಕರಣ-01: ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಲ್ಯಾಮಿನೇಷನ್ ವೇಳೆ ದಾಖಲಾತಿಯೊಂದು ಹಾನಿಗೊಳಗಾದ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಕೇಳಿದಾಗ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಅವರು ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಫಾತಿಮತ್ ಮಿಸ್ವಾನ ಹಾಗೂ ಅವರ ಸಹೋದರ-ಸಹೋದರಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 97/2026ರಂತೆ BNSನ ಕಲಂ 352, 115(2), 109 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸೆಪ್ಟೆಂಬರ್ 2, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ-02: ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಹಾನಿಗೊಂಡ ವಿಚಾರವಾಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಅಂಗಡಿಯಲ್ಲಿ ಗಲಾಟೆ ನಡೆಸಿ, ದಾಖಲಾತಿ ಅಥವಾ ₹10,000 ನೀಡುವಂತೆ ಒತ್ತಾಯಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ.

Leave a Reply

Your email address will not be published. Required fields are marked *

error: Content is protected !!