ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪದ ನಡುವೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪ ಬಂದಾಗ ಅಂದು ನಾನೇ ಸ್ವಯಂ ರಾಜೀನಾಮೆ ನೀಡಿದ್ದೆ. ಅಂದು ರಾಜ್ಯದ ತನಿಖಾ ಸಂಸ್ಥೆಗಳು ಆರೋಪ ಮುಕ್ತ ಮಾಡಿವೆ. ಅದರೆ, ಬಿಜೆಪಿ ನಾಯಕರು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರದಲ್ಲಿ ಮತ್ತೆ ಸಿಲುಕಿಸುವ ಪ್ರಯತ್ನ ಮಾಡಿವೆ ಎಂದು ಆರೋಪಿಸಿದರು.





