August 29, 2026

ಮಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image914679066-1787971326867

ಮಂಗಳೂರು: ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರೆಂಟ್ ಆರೋಪಿತನನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುವಾಚ್ (45) ಎಂದು ಗುರುತಿಸಲಾಗಿದೆ. ಇವರು ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರರಾಗಿದ್ದು, ಮೂಲತಃ ಉಳ್ಳಾಲದ ಹಿಲೇರಿ ನಗರ, ಮುಕ್ಕಚೇರಿ, ಮಂಗಳೂರಿನ ನಿವಾಸಿಯಾಗಿದ್ದಾರೆ. ಪ್ರಸ್ತುತ ಕೇರಳ ರಾಜ್ಯದ ಇರಿಕ್ಕೂರು ಪೆರುವಳತ್ ಪರಂಬು ಎಂಬಲ್ಲಿ ವಾಸವಾಗಿದ್ದರು.

ಆರೋಪಿತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮೊ.ನಂ. 166/2006ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 379ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಆರೋಪಿತನು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಎಲ್‌ಪಿಸಿ ವಾರೆಂಟ್ ಜಾರಿಗೊಳಿಸಿತ್ತು.

ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ 2026ರ ಆಗಸ್ಟ್ 28ರಂದು ಆರೋಪಿತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊಲೀಸರ ನಿರಂತರ ಪ್ರಯತ್ನದ ಫಲವಾಗಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ವಾರೆಂಟ್‌ನ್ನು ಕಾರ್ಯಗತಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!