ಕಾರ್ಕಳ ಶಾಸಕರ ಕುರಿತ ಪ್ರಚೋದನಕಾರಿ ಪೋಸ್ಟ್: ಆರೋಪಿ ಬಂಧನ
ಕಾರ್ಕಳ: ಶಾಸಕ ಸುನೀಲ್ ಕುಮಾರ್ ಅವರ ಕುರಿತ ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಪ್ರಸಾದ್ ಶೆಟ್ಟಿ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಸಾರ್ವಜನಿಕರಿಗೆ ಪ್ರಚೋದನೆ ನಿಡುವ ಉದ್ದೆಶದಿಂದ ಶಾಸಕ ಸುನೀಲ್ ಕುಮಾರ್ ಅವರನ್ನು ಕೊಲೆ ಮಾಡಬೇಕು ಎಂಬ ರೀತಿಯಲ್ಲಿ ಪ್ರಚೋದನಾಕಾರಿ ವಿಡಿಯೋ ಸೃಷ್ಟಿಸಿ ಅವಾಚ್ಯ ಶಬ್ದದಿಂದ ಬೈದಿರುವುದಾಗಿ ವಿಘೇಶ್ ಪ್ರಸಾದ್ ರಾವ್ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಪ್ರಸಾದ್ ಶೆಟ್ಟಿಯನ್ನು ಬಂಧಿಸಿದ್ದಾರೆ.
ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯಲ್ಲನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





