September 14, 2026

ಶಿವಮೊಗ್ಗ: ಕಾರು ಅಪಘಾತಕ್ಕೆ ತುಂಡಾಗಿ ಬಿದ್ದ ವಿದ್ಯುತ್‌ ಕಂಬ

0
image_editor_output_image2119720632-1789389556836

ಶಿವಮೊಗ್ಗ: ಕಾರಿಗೆ (Car) ಅಡ್ಡ ಬಂದ ಕಡವೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ  ಘಟನೆ ಹೊಸನಗರ  ತಾಲೂಕಿನ ನಗರ ಸಮೀಪದ ನೂಲಿಗ್ಗೇರಿ ಬಳಿ ನಡೆದಿದೆ.

ಸಾಗರ ಮೂಲದ ಪ್ರಕಾಶ್ ಎಂಬವರು ಮಣಿಪಾಲ್‌ನಿಂದ ಸಾಗರಕ್ಕೆ ವಾಪಸ್ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ನೂಲಿಗ್ಗೇರಿ ಬಳಿ ಕಡವೆ ದಿಢೀರ್ ರಸ್ತೆಗೆ ನುಗ್ಗಿದೆ. ಕಡವೆಗೆ ಕಾರು ಡಿಕ್ಕಿಯಾಗೋದನ್ನು ತಪ್ಪಿಸಲು ಚಾಲಕ ಕಾರನ್ನು ಬದಿಗೆ ತರಲು ಯತ್ನಿಸಿದ್ದು, ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ತುಂಡಾಗಿ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!